Friday, 8 May 2020

ಮಕ್ಕಳ ನೀತ ಕಥೆ ಅರಸಿ ಬಂದ ಅದೃಷ್ಟ


ಮಕ್ಕಳ ಕಥೆ: ೦೪ ಅರಸಿ ಬಂದ ಅದೃಷ್ಟ


ಚಂದಾಪುರ ಎನ್ನುವ ಹಳ್ಳಿಯಲ್ಲಿ ರಾಮ-ಭೀಮ ಎಂಬ ಇಬ್ಬರು ಅಣ್ಣತಮ್ಮರಿದ್ದರು. ಅವರಿಗೆ ಮೂರ್ತಿಗಳನ್ನು ತಯಾರಿಸುವ ಕಲೆ ರಕ್ತಗತವಾಗಿತ್ತು. ಹಾಗಾಗಿ ಪ್ರತಿದಿನ ಕಷ್ಟಪಟ್ಟು ವಿವಿಧ ಮೂರ್ತಿಗಳ ತಯಾರಿಸಿ ಮಾರಲು ಇಡುತ್ತಿದ್ದರು. ಆದರೆ ಅವರ ಹಳ್ಳಿಯಲ್ಲಿ ಯಾರೂ ಕೊಳ್ಳುವವರೇ ಇರಲಿಲ್ಲ. ಕಾರಣ ಹಳ್ಳಿಗರಿಗೆ ಅದರ ಅವಶ್ಯಕತೆಯೇ ಇರಲಿಲ್ಲ. ಹಾಗಾಗಿ ತುಂಬಾ ಕಷ್ಟದಲ್ಲಿ ಜೀವನ ನಡೆಯುತಲಿತ್ತು. ಇದನ್ನು ಗಮನಿಸಿದ ಅವರ ಗೆಳೆಯ ಒಂದು ಉಪಾಯ ಮಾಡಿದ. ನಿಮ್ಮ ಮೂರ್ತಿಗಳು ಮಾರಾಟವಾಗಲು ನಾನು ಹೇಳಿದ ಹಾಗೆಯೇ ಮಾಡಿರಿ ಎಂದು ಸಲಹೆ ನೀಡಿದ. ಅದರಂತೆ ಅಣ್ಣ ರಾಮು ಪ್ರತಿದಿನ ಬೆಳಿಗ್ಗೆ ಒಂದಷ್ಟು ಮೂರ್ತಿಗಳನ್ನು ಗೋಣಿಚೀಲದಲ್ಲಿ ತುಂಬಿಸಿಕೊಂಡು ಪಟ್ಟಣದ ಕಡೆಗೆ ಹೋಗುವ ಮಾರ್ಗದಲ್ಲಿ ಇರಿಸಿ ಮಾರಾಟ ಮಾಡಲು ಕುಳಿತುಕೊಳ್ಳುತ್ತಿದ್ದ. ಅಲ್ಲಿ ಇರುವ ವಿಶಾಲವಾದ ಮರದ ಕೆಳಗೆ ಎಲ್ಲಾ ಮೂರ್ತಿಗಳ ಸುಂದರವಾಗಿ ಜೋಡಿಸಿಟ್ಟು ಗಿರಾಕಿಗಳಿಗಾಗಿ ಕಾಯುತ್ತಿದ್ದ. ಒಮ್ಮೆ ವಿದೇಶಿಗರು ಸಂಸಾರ ಸಮೇತ ಕಾರಿನಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಇವನ ಮೂರ್ತಿಗಳ ಕೆತ್ತನೆಯ ಮೇಲೆ ದೃಷ್ಟಿ ಹಾಯಿಸಿದರು. ಅವರಿಗೂ  ಖುಷಿಯಾಗಿ ಕಾರು ನಿಲ್ಲಿಸಿ ಖರೀದಿಸಲು ಹೊರಟರು. ಆಗ ರಾಮುವು ಮನದೊಳಗೆ ಖುಷಿ ಪಟ್ಟು "ವಿದೇಶಿಗರು ನನ್ನ ಕಡೆಗೆ ಬರುತ್ತಾ ಇದ್ದಾರೆ. ಈದಿನ ಚೆನ್ನಾಗಿದೆ. ನಮ್ಮ ಮೂರ್ತಿಗಳಿಗೆ ಒಳ್ಳೆ ಬೆಲೆ ಸಿಕ್ಕಿ ಮಾರಾಟವಾಗಲಪ್ಪ.." ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದನು. ಹಾಗೆಯೇ ವಿದೇಶಿಗರು ಬಂದು ಧ್ಯಾನಸ್ಥ ಬುದ್ಧನ ಮೂರ್ತಿಯನ್ನು ಕೇಳಿದರು. ಅವನು ಅದರ ಬೆಲೆ ಒಂದು ನೂರು ರೂಪಾಯಿ ಎಂದನು‌. ಆಗ ವಿದೇಶಿಗರಿಗೆ ಅಚ್ಚರಿಯಾಯಿತು. "ಇಷ್ಟು ಕಡಿಮೆ ಬೆಲೆಯಲ್ಲಿ ಮಾರುತ್ತಿರುವೆಯಾ? ನಿನಗೆ ನಿನ್ನ ಮೂರ್ತಿಗಳ ಮೌಲ್ಯ ತಿಳಿದಿಲ್ಲ. ನಾವಿದನ್ನು ವಿದೇಶಕ್ಕೆ ಕೊಂಡೊಯ್ದರೆ  ಲಕ್ಷ ಲಕ್ಷ ರೂಪಾಯಿ ಮೌಲ್ಯವಿದೆ, ತಿಳಿದಿರುವೆಯಾ? ಎಂದು ಕೇಳಿದರು.
ಆಗ ರಾಮುವಿಗೆ " ಹೌದೇ, ನಿಜಕ್ಕೂ ಈ ವಿಷಯ ನನಗೆ ತಿಳಿದಿಲ್ಲ ಬುದ್ಧಿ. ನಾವು ಹಳ್ಳಿಗರು. ನೀವೇ ಒಂದಷ್ಟು ಹಣ ಕೊಟ್ಟು ಮೂರ್ತಿ ತೆಗೆದುಕೊಂಡು ಹೋಗಿ ಎಂದನು. ಆಗ ಸಾವಿರ ರೂಪಾಯಿ ನೀಡಿ ಮೂರ್ತಿಯ ಖರೀದಿಸಿದರು. ಹಾಗೆಯೇ ವಾಪಾಸ್ಸಾಗುವಾಗ ಕಿವಿಮಾತನ್ನು ಹೇಳಿದರು. "ನಿಮ್ಮ ಪಕ್ಕದ ಊರಿನ ಜಾತ್ರೆ ನೋಡಲು ನಮ್ಮಂತೆ ನೂರಾರು ವಿದೇಶಿಗರು ಬರುವವರಿದ್ದಾರೆ. ಎಲ್ಲರೂ ಇದೇ  ಮಾರ್ಗದಲ್ಲಿ ಸಾಗಬೇಕು. ಇನ್ನಷ್ಟು  ಆಕರ್ಷಕ ಮೂರ್ತಿಗಳನ್ನು ತಯಾರಿಸಿ ಮಾರಲು ಕುಳಿತುಕೋ. ಯಾರು ಕೇಳಿದರೂ ಸಾವಿರ ರೂಪಾಯಿ ಎಂದೇ ಹೇಳು", ಎಂದು ಹೇಳಿ ಹೊರಟುಹೋದರು. ರಾಮುವಿಗೆ ಎಲ್ಲಿಲ್ಲದ ಸಂತಸವಾಯಿತು.
ಸಂಜೆಯಾದ ಕಾರಣ ಮೂರ್ತಿಗಳನ್ನು ಗೋಣಿ ಚೀಲದಲ್ಲಿ ತುಂಬಿಸಿಟ್ಟು ಮರದ ಹಿಂಬದಿಯಲ್ಲೇ ಮುಚ್ಚಿಟ್ಟು ಮನೆ ಕಡೆಗೆ ನಡೆದನು. ತಮ್ಮನಲ್ಲಿ ನಡೆದುದನ್ನು ಹೇಳಿ ಖುಷಿಪಟ್ಟನು. ಅಷ್ಟೊಂದು ಹಣವನ್ನು ಎಂದೂ ನೋಡದ ಅವರು ಕನಸಿನ ಲೋಕದಲ್ಲಿ ತೇಲುತ್ತಿದ್ದರು. ಹಾಗೆಯೇ ವಿದೇಶಿಗನ ಸಲಹೆಯಂತೆ ಒಂದಷ್ಟು ಹೊಸ ಬಗೆಯ ಮೂರ್ತಿಗಳನ್ನು ರಾತ್ರಿಪೂರ ನಿದಿರೆ ಬಿಟ್ಟು ತಯಾರು ಮಾಡಿದರು. ಆದರೆ ಅವನ ಮೂರ್ಖತನದ ನೆನಪೇ ಆಗಲಿಲ್ಲ. ರಾಮು ಮುಂಜಾನೆ ಉಳಿದ ಹೊಸ ಮೂರ್ತಿಗಳ ಹಿಡಿದು ಅದೇ ಮರದ ಕೆಳಗೆ ಬಂದು ನೋಡಿದರೆ ಅಲ್ಲಿ ಮೂರ್ತಿಗಳೇ ಮಾಯವಾಗಿದ್ದವು. ಕಾರಣ ಯಾರೋ ಕದ್ದೊಯ್ದಿದ್ದರು‌. ರಾಮುವಿಗೆ ಒಮ್ಮೆ ಎದೆ "ದಗ್" ಎಂದಾಯಿತು. "ಅಷ್ಟು ಬೆಲೆಬಾಳುವ ಮೂರ್ತಿಗಳ ಕಳೆದುಕೊಂಡೆವಲ್ಲ, ಏನು ಮಾಡುವುದೀಗ? ಯಾರು ಕದ್ದರು? ನಮ್ಮ ಮೂರ್ತಿಗಳೆಲ್ಲ ಎಲ್ಲಿ ಹೋಯಿತು? ಅಯ್ಯೋ!!" ಎಂದು ಗೋಳಾಡಿದನು. ಚಿಂತಾಕ್ರಾಂತನಾಗಿ ತಲೆಗೆ ಕೈಹೊತ್ತು ಕುಳಿತುಕೊಂಡನು. ನಾನೆಂತ ಮೂರ್ಖ‌ ತಪ್ಪುಮಾಡಿಬಿಟ್ಟೆನಲ್ಲ ಎಂದು ರೋಧಿಸಿದನು. ವ್ಯಾಪಾರ ಮಾಡಲು ಯಾವ ಆಸಕ್ತಿಯೂ ಇರಲಿಲ್ಲ. ಆದರೆ ಆ ದಿನವೂ ಒಬ್ಬ ವಿದೇಶಿಗರು ಬಂದು ಸಾವಿರ ರೂಪಾಯಿ ನೀಡಿ ಮೂರ್ತಿ ಖರೀದಿಸಿದ್ದರು‌. ಈ ದಿನ ಮತ್ತೆ ತಪ್ಪು ಮಾಡಲು ಹೋಗಲಿಲ್ಲ. ಸಂಜೆಯ ಮೇಲೆ ಉಳಿದ ಮೂರ್ತಿಗಳ ಚೀಲದಲ್ಲಿ ತುಂಬಿಸಿಕೊಂಡು ಮನೆಗೆ ವಾಪಾಸ್ಸಾದನು. ತಮ್ಮನಿಗೆ ನಡೆದ ಘಟನೆಯನ್ನು ವಿವರಿಸಿದನು. ಅವನೂ ಕೂಡ ಅಣ್ಣನಿಗೆ ಸಮಾಧಾನ ಮಾಡಿ ಆ ರಾತ್ರಿಯೂ  ನಿದಿರೆ ಮಾಡದೇ ಒಂದಷ್ಟು ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿಸಿಕೊಂಡರು.ಹೀಗೆ ಕಷ್ಟಪಟ್ಟು ಹಗಲು ರಾತ್ರಿಯೆನ್ನದೇ ಅನೇಕ ಮೂರ್ತಿಗಳ ತಯಾರಿಸಿದರು. ಅಣ್ಣನು ಮಾರಾಟಮಾಡಲು ಹೋಗುತ್ತಿದ್ದ. ತಮ್ಮನು ಮೂರ್ತಿಗಳ ತಯಾರಿಸುತ್ತಿದ್ದ‌ನು. ಜಾತ್ರೆಯಿದ್ದ ಕಾರಣ ಬಂದ ವಿದೇಶಿಗರು ಖರೀದಿಸಿದರು. ಜಾತ್ರೆಗೂ ಒಂದಷ್ಟು ಮೂರ್ತಿಗಳ ಕೊಂಡೊಯ್ದು ಮಾರಲು ಆರಂಭಿಸಿದರು. ಹೀಗೆ ಒಂದು ತಿಂಗಳಲ್ಲಿ ಶ್ರೀಮಂತರಾದರು. ಅವರ ಕಷ್ಟಗಳೆಲ್ಲ ಕಳೆಯಿತು‌.
.
.
ಕಥೆಗಾರ್ತಿ : ಸಿಂಧು ಭಾರ್ಗವ್. ಬೆಂಗಳೂರು

ಮಕ್ಕಳ ನೀತಿ ಕಥೆ ಸ್ವಾರ್ಥಿಯಾಗದಿರಿ


ಮಕ್ಕಳ ಕಥೆ ೦೩:  ಸ್ವಾರ್ಥಿಯಾಗದಿರಿ


ಕಾನನದ ಮಧ್ಯದಲ್ಲಿ ಒಂದು ವಿಶಾಲವಾದ ಮರವಿತ್ತು. ಅದು‌ ಮುಗಿಲಿನಷ್ಟು ಎತ್ತರ ಹಾಗೆಯೇ ತನ್ನ ಅಗಲವಾದ ರೆಂಬೆಗಳನ್ನು ಚಾಚಿ ಎಲ್ಲಾ ಕಡೆ ಹರಡಿಕೊಂಡು ಬೆಳೆದಿತ್ತು. ಅದರಲ್ಲಿ ಒಂದಷ್ಟು ಗಿಡುಗನ ಗೂಡುಗಳು ಹಾಗೂ ಕಾಗೆಯ ಗೂಡುಗಳಿದ್ದವು.  ಎಲ್ಲವೂ ತಮ್ತಮ್ಮ ಗೂಡಿನಲ್ಲಿ ಮರಿಗಳ ಜೊತೆಗೆ ವಾಸವಾಗಿದ್ದವು. "ಚೀವ್ ಚೀವ್..." ಎಂಬ ಚಿಲಿಪಿಲಿಯು ಯಾವಾಗಲೂ  ಕೇಳಿ ಬರುತ್ತಿತ್ತು. ಗಿಡುಗನು ತನ್ನ ಗೂಡಿನ ಮೇಲೆಯೇ ಗಸ್ತು ಹೊಡೆಯುತ್ತಾ ಇರುತ್ತಿತ್ತು. ದೂರ-ದೂರಕೆ ಹಾರಿ ಹೋಗಿ ಗಂಡು ಗಿಡುಗವು ಆಹಾರ ತರುವ ತನಕ ಹೆಣ್ಣು ಗಿಡುಗವು ಮರಿಗಳನ್ನು ಕಾಯುವುದು ಅದರ ಜವಾಬ್ದಾರಿ ಆಗಿತ್ತು. ಒಮ್ಮೆ ಇದನ್ನೆಲ್ಲ ದೂರದಿಂದ ಗಮನಿಸುತ್ತಿದ್ದ ಕಾಗೆಗೆ, "ಆ ಗೂಡಿನಲ್ಲೇನಿರಬಹುದು. ಈ ಗಿಡುಗ ಏಕೆ ಗಸ್ತು ಹೊಡೆಯುತ್ತಿದೆ.."ಎಂಬ ಪ್ರಶ್ನೆ ಮೂಡಿತು‌. ಒಮ್ಮೆ ಹೋಗಿ ನೋಡಲೇಬೇಕು ಎಂಬ ಕುತೂಹಲ ಹೆಚ್ಚಿತು. ಆದರೆ ಆ ಹೆಣ್ಣು ಗಿಡುಗವೂ ಎಲ್ಲಿಗೂ ಕದಲುತ್ತ ಇರಲಿಲ್ಲ‌. ಅದರಿಂದ ಕಾಗೆಯೆ ಅತ್ತ ಕಡೆ ಹೋಗಲು ಭಯವಾಗುತ್ತಿತ್ತು.
ಒಮ್ಮೆ ಆ ಸಮಯ ಬಂದೇ ಬಿಟ್ಟಿತು. ಹೆಣ್ಣು ಗಿಡುಗ ಆಕಾಶದೆತ್ತರಕ್ಕೆ ಹಾರಿ ಮೋಡದ ಮರೆಯಲಿ ಮಾಯವಾಯಿತು. ಆಗ ಕಾಗೆಗೆ ತನ್ನ ಕೆಲಸಕ್ಕೆ ಇದೇ ಸರಿಯಾದ ಸಮಯ ಎಂದು ಮನದಲ್ಲೇ ಬಗೆದು ಗಿಡುಗನ ಗೂಡಿನ ಬಳಿ ಹಾರಿ ಬಂದಿತು. ಅಲ್ಲಿ ನೋಡಿದರೆ ಪರಮಾಶ್ಚರ್ಯ. "  ಹದ್ದಿಗೆ ಪುಟ್ಟಪುಟ್ಟ ಮೂರು ಮರಿಗಳಿದ್ದವು. ಎಳೆಮರಿಗಳ ನೋಡಿ ಕಾಗೆಯ ಬಾಯಲ್ಲಿ ನೀರು ಬಂದಿತು. ಹೇಗಾದರೂ ಮಾಡಿ ಇದನ್ನು ಹೊತ್ತೊಯ್ದು ತನ್ನ ಮರಿಗಳಿಗೆ ಆಹಾರವಾಗಿ ಕೊಡಬೇಕು ಎಂಬ ಕೆಟ್ಟ ಆಲೋಚನೆ ಮಾಡಿತು. ಹಾಗೆಯೇ ಒಂದನ್ನು ಅಲ್ಲಿಯೇ ತಿಂದು, ಒಂದನ್ನು ತನ್ನ ಕೊಕ್ಕಿನಿಂದ ಕುಕ್ಕಿ ಕುಕ್ಕಿ ಸಾಯಿಸಿತು. ಹಾಗೆಯೇ ಸತ್ತ ಗಿಡುಗನ ಮರಿಯನ್ನು ಕಾಲಿನಲ್ಲಿ ಬಿಗಿಹಿಡಿತು ತನ್ನ ಗೂಡಿನತ್ತ ಹಾರಿಹೋಯಿತು.
ಅಲ್ಲಿ ನೋಡಿದರೆ ಏನ್ ಆಶ್ಚರ್ಯ. ಗಾಬರಿ ಹುಟ್ಟಿಸುವ ಘಟನೆ ನಡೆದಿತ್ತು. ತನ್ನ ಮರಿಗಳ ಪುಕ್ಕಗಳೆಲ್ಲ ಚೆಲ್ಲಪಿಲ್ಲಿಯಾಗಿ ಬಿದ್ದಿದ್ದವು. ಮರಿಗಳು ಕಾಣಿಸುತ್ತಿಲ್ಲ. "ಅಯ್ಯೋ... ನನ್ನ ಮರಿಗಳೆಲ್ಲಿ ??" ಎಂದು ಗೋಳಾಡಿತು. "ನಾನು ಅವುಗಳಿಗೆ ತಂದ ಈ ಹಸಿ ಮಾಂಸವನ್ನು ಏನು ಮಾಡಲಿ. ಇದನ್ನು ತಿನ್ನಲು ಈಗ ನನ್ನ ಮರಿಗಳೇ ಇಲ್ಲವಲ್ಲ .." ಎಂದು ರೋಧಿಸಿತು. ಆಗ ಮರದಿಂದ ಸರಕ್ಕನೇ ಸರಿದು ಹೋಗುತ್ತಿರುವ ಸರ್ಪವೊಂದು ಕಾಣಿಸಿತು. ಏನೆಂದು ಕಾಗೆ ಅದರ ಕಡೆಗೆ ಧಾವಿಸಿ ನೋಡಿದರೆ ತನ್ನ ಮರಿಯ ಹಸಿಮಾಂಸವನ್ನು ಬಾಯಲ್ಲಿ ಕಚ್ಚಿಕೊಂಡಿತ್ತು. ಸರಸರನೆ ಸರಿದು ಮಾಯವಾಯಿತು. ಆದರೆ ಆಗಸದಲ್ಲಿ ಗಿಡುಗ ಗಸ್ತು ಹೊಡೆಯುತ್ತಲೇ ಇದೆ. ಅಲ್ಲದೇ ಉಳಿದ ಒಂದು ಮರಿಯು ಗಾಬರಿಯಿಂದ ಕಿರುಚುತ್ತ ತಾಯಿ ಗಿಡುಗ ಬರುವುದನ್ನೇ ಕಾಯುತಲಿತ್ತು.
.
.
ನೀತಿ: ನಾವು ಕೇಡು ಬಯಸಿದರೆ ನಮಗೂ ಕೇಡು ಸಂಭವಿಸುತ್ತದೆ. ಕಾಗೆಯು ಹೇಗೆ ಗಿಡುಗನ ಮರಿಗಳನ್ನು ಸಾಯಿಸಿತೋ ಹಾಗೆಯೇ ಸರ್ಪವೂ ಕಾಗೆಯ ಮರಿಯನ್ನು ಸಾಯಿಸಿತ್ತು. ಹೆತ್ತ ಕರುಳಿನ ಸಂಕಟ ಎಲ್ಲದಕ್ಕೂ ಒಂದೇ ತೆರನಾಗಿರುತ್ತದೆ.
.
.
ಕಥೆಗಾರ್ತಿ: ಸಿಂಧು ಭಾರ್ಗವ್. ಬೆಂಗಳೂರು-೨೧

ಮಕ್ಕಳ ‌ನೀತಿ ಕಥೆ ಮರ ಮತ್ತು ಮಾಲಿ


ಮಕ್ಕಳ ಕಥೆ ೦೨  ಮರ ಮತ್ತು ಮಾಲಿ

ಒಮ್ಮೆ ಮಾಲಿ ಮರಕಡಿಯಲು ಕಾಡಿಗೆ ಹೋಗಿದ್ದನು. ಆಗ ಒಂದು ಕರಡಿ ಎದುರಿಗೆ ಬಂದು‌ ಮರ ಕಡಿಯಲು ಅಡ್ಡವಾಗಿ ನಿಂತಿತು. "ಏಕೆ ಕರಡಿಯಣ್ಣ, ಏಕೆ ಮರ ಕಡಿಯಲು ಬಿಡುತ್ತಿಲ್ಲ. ಏಳು ಇಲ್ಲಿಂದ.." ಎಂದು ಮಾಲಿ ಹೇಳಿದನು.
ಆಗ ಕರಡಿಯು "ಬೇಡ ಮಾಲಿ, ಮರವನ್ನು ಕಡಿಯದಿರು. ಇದರಲ್ಲಿ ತುಂಬಾ ಹಲಸಿನ ಹಣ್ಣು ಸಿಗುತ್ತದೆ. ಹಾಗೆಯೇ ಜೇನುಗೂಡುಗಳಿವೆ. ನೀನು ಮರ ಕಡಿದರೆ ನನ್ನಂತಹ ಅದೆಷ್ಟೋ ಕರಡಿಗಳಿಗೆ ಆಹಾರ ತಪ್ಪಿಹೋಗುತ್ತದೆ. ಜೇನುಹುಳಗಳಿಗೂ ಬದುಕಲು ತೊಂದರೆಯಾಗುತ್ತದೆ ಎಂದಿತು. ಪಾಪ.. ಎನಿಸಿ ಮಾಲಿ ಮರ ಕಡಿಯುವುದನ್ನು ಬಿಟ್ಟು ಮುಂದಕ್ಕೆ ಹೋದನು‌‌. ಒಂದಷ್ಟು ದೂರ ಹೋದ ಮೇಲೆ ಮತ್ತೊಂದು ಹಳೆಯ ಮರವನ್ನು ನೋಡಿ ಕಡಿಯಲು ಮುಂದಾದನು. ಆಗ ಒಂದಷ್ಟು ಹಕ್ಕಿಗಳ ಹಿಂಡು "ಸರಕ್ಕನೆ" ಅವನ ಹಣೆಗೆ ಚುಚ್ಚಿ ಹಾರಿಹೋದವು. ಕೆಲವು ಕಿರುಚಲು ಶುರುಮಾಡಿದವು. ಆಗ ಮುದಿಹಕ್ಕಿಯೊಂದು ಬಂದು "ಬೇಡ ಮಾಲಿ ಮರವನ್ನು ಕಡಿಯಬೇಡ. ನೀನು ಮರ ಕಡಿದರೆ ನಮ್ಮಂತಹ ಅದೆಷ್ಟೋ ಪಕ್ಷಿಗಳಿಗೆ ವಾಸಿಸಲು ಮನೆಯೇ ಇರದಂತಾಗುತ್ತದೆ. ಹಾಗೆಯೇ ಸೊಪ್ಪುಗಳನ್ನು ತಿನ್ನಲು ಬರುವ ಪ್ರಾಣಿಗಳಿಗೂ ಉಪವಾಸವಿರಬೇಕಾಗುತ್ತದೆ. ನೆರಳು ಬಯಸಿ ಬರುವ ಜನರೂ ನೆರಳಿಲ್ಲದೇ ವಾಪಾಸ್ಸಾಗುವರು, ಮಳೆ -ಬೆಳೆ ಎಲ್ಲವೂ ಕ್ಷೀಣಿಸುತ್ತದೆ." ಎಂದನು. ಆ ಮುದಿಪಕ್ಕಿಯ ಮಾತು ಕೇಳಿ ಮಾಲಿಗೆ ಹೌದೆನಿಸಿ ಮನೆಗೆ ವಾಪಸ್ಸಾದನು.
ಮನೆ ತಲುಪುವಾಗಲೇ ರಾತ್ರಿಯಾದ ಕಾರಣ, ಊಟ ಮಾಡಿ ನಿದಿರೆಗೆ ಜಾರಿದನು. ಆಗ ಒಂದು ಸದ್ದು ಕೇಳಿಸತೊಡಗಿತು. ಕರ್ರ್...ರ್ರ್...ರ್ರ್... ಎಂಬ ಶಬ್ದವು ಮನೆಹೊರಗಿನಿಂದ ಜೋರಾಗಿ ಕೇಳಿಸುತ್ತಲಿತ್ತು. ಆಗ ಹೊರಗೆ ಹೋಗಿ ನೋಡಿದರೆ ಯಾರೂ ಇರಲಿಲ್ಲ‌. ಮತ್ತೆ ಮಲಗಲು ಹೋದನು. ಮತ್ತದೇ ಶಬ್ದ ಕೇಳಿ ಬಂದಾಗ ಮನೆಯ ಹಿತ್ತಲಿನ ಕಡೆಗೆ ಹೋದನು. ಆಗ ಹಿತ್ತಲಿನಲ್ಲೊಬ್ಬ ತನ್ನ ಮನೆಯದೇ ಮರವನ್ನು ಕಡಿಯುತ್ತಾ ಇದ್ದನು. ಅದನ್ನು ನೋಡಿ ಅಚ್ಚರಿಯಾಯಿತು. ಕೋಪಬಂದು ಅವನನ್ನು ಚೆನ್ನಾಗಿ ಹೊಡೆದು ಮರಕ್ಕೆ ಕಟ್ಟಿ ಹಾಕಿದನು. ನಂತರ ಹೇಳು "ಯಾರು ಮರ ಕಡಿಯಲು ಹೇಳಿದ್ದು... ಹ್ಮ.ಬೇಗ ಹೇಳು" ಎಂದು ದಬಾಯಿಸಿದನು. ಆಗ ಮರಕಡಿಯುವವ ಹೆದರಿಕೆಯಿಂದ "ನಾನಲ್ಲ ಬುದ್ಧಿ.. ನಂದೇನು ತಪ್ಪಿಲ್ಲ. ನಿಮ್ಮ ಹೆಂಡತಿಯೇ ಮರಕಡಿಯಲು ಹೇಳಿದ್ದು, ನನ್ನ ಬಿಟ್ಟುಬಿಡಿ ಎಂದು ಗೋಗರೆದನು.
ಮಾಲಿಗೆ ಎಲ್ಲಿಲ್ಲದ ಕೋಪ ಬಂದಿತು. ಹೆಂಡತಿಯ ಕರೆದು ಚೆನ್ನಾಗಿ ಬೈದನು. " ನನ್ನನ್ನು ಕೇಳದೇ ಮರವನ್ನು ಏಕೆ ಕಡಿಯಲು ಹೇಳಿದೆ. ನನ್ನ ತಂದೆಯವರು ನೆಟದಟ ಗಿಡವಿದು‌ ಈಗ ಹೆಮ್ಮರವಾಗಿ ಬೆಳೆದಿದೆ‌. ಈ ಮರದಿಂದ ಎಷ್ಟೆಲ್ಲ ಉಪಯೋಗ ಪಡೆದಿದ್ದೀ ನೀನು. ಈಗೇನು ಸಮಸ್ಯೆ ಎದುರಾಯಿತು‌ ಏಕೆ ಮರ ಕಡಿಯಲು ಹೇಳಿದೆ? ಅದು ನಿನಗೇನು ಮಾಡಿತ್ತು? ಎಂದು ಹೊಡೆಯಲು ಮುಂದಾದನು.
ಆಗ ಹೆಂಡತಿಯು ಹೆದರುತ್ತಾ "ತಪ್ಪಾಯ್ತು ಕ್ಷಮಿಸಿಬಿಡಿ.. ಹಣದ ಆಸೆಗೆ ಮರ ಕಡಿಯಲು ಹೇಳಿದೆ. ನಿಮಗೆ ಗೊತ್ತಾಗ ಬಾರದೆಂದು ರಾತ್ರಿ ಬರಲು ಹೇಳಿದೆ. ಇನ್ನೆಂದೂ ಈ ತಪ್ಪನ್ನು ಮಾಡಲಾರೆ " ಎಂದು ಕೈಮುಗಿದು ಬೇಡಿಕೊಂಡಳು.
ಮರದಿಂದ ನೆರಳು, ಹಣ್ಣು ಹೂವು, ಪಕ್ಷಿಗಳಿಗೆ ಇರಲು ವಾಸಸ್ಥಾನ, ಕಟ್ಟಿಗೆ ಗೊಬ್ಬರಕ್ಕೆ ಸೊಪ್ಪು ಹೀಗೆ ಎಷ್ಟೆಲ್ಲ ಉಪಯೋಗವಿದೆ. ಹಾಗಾಗಿ,ಮಕ್ಕಳೇ ಮರವನ್ನು ಕಡಿಯಲು ಬಿಡಬೇಡಿ. ಗಿಡವನ್ನು ನೆಡಿ.
.
.
ಕಥೆಗಾರ್ತಿ : ಸಿಂಧು ಭಾರ್ಗವ್. ಬೆಂಗಳೂರು-೨೧

ಮಕ್ಕಳ ನೀತಿ ಕಥೆಗಳು ಮನಃ ಪರಿವರ್ತನೆ

ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ತು :
ಮಕ್ಕಳ ಸಾಹಿತ್ಯವನ್ನು ಬೆಳೆಸುವ ಜವಾಬ್ದಾರಿ ನಮ್ಮಲ್ಲರದ್ದು.


ಮಕ್ಕಳ ಕಥೆ:೦೧
ಮನಃ ಪರಿವರ್ತನೆ (ಸಾಮಾನ್ಯರಲ್ಲಿ ಸಾಮಾನ್ಯರಾಗಿ ಬಾಳಿರಿ)

ಒಬ್ಬ ರಾಜ ತನ್ನ ರಾಜ್ಯವನ್ನು ನೋಡಲು ಕುದುರೆಯನೇರಿ ಹೊರಟನು. ಅವನ ರಾಜ್ಯದ ಜನರ ಸ್ಥಿತಿಗತಿಯನ್ನು ಪರೀಕ್ಷಿಸಿ ಕಷ್ಟನೋವುಗಳನ್ನು ಕೇಳಿ ಅವರಿಗೆ ಸಮಾಧಾನ ಮಾಡಿ, ಕೈಲಾದ ಸಹಾಯ ಮಾಡಲು ಹೊರಟಿದ್ದನಂತೆ. ಹೀಗೆ ಒಂದು ಊರಿನ ಹಾದಿಯಲ್ಲಿ ಹೋಗುವಾಗ ತುಂಬಾ ಹಸಿವಾಯಿತಂತೆ. ತಿನ್ನಲು ಏನೂ  ಕೊಂಡೊಯ್ದಿರದ ಕಾರಣ ಸುತ್ತಮುತ್ತ ನೋಡಿದ. ಆಗ ಒಂದು ಬ್ರಹದಾಕಾರದ ಮರದಲ್ಲಿ ತುಂಬಾ ಹಣ್ಣುಗಳು ಜೋತುಬಿದ್ದಿದ್ದವು. ಅದನ್ನು ಕಂಡು ಬಾಯಿಯಲ್ಲಿ ನೀರು ಬಂದಿತು. ಆದರೆ ಆ ಮರ ಎತ್ತರವಿದ್ದ ಕಾರಣ ಒಂದು ಹಣ್ಣೂ ಕೈಗೆ ಎಟಕುತ್ತ ಇರಲಿಲ್ಲ. ಹಾಗಾಗಿ ಅವನಿಗೆ ಬೇಸರವಾಯಿತು‌. ಆಗ ಅಲ್ಲೇ ಇದ್ದ ಒಬ್ಬ ಮರ ಕಡಿಯುವವನಲ್ಲಿ ಆ ಹಣ್ಣುಗಳನ್ನು ಕೊಯ್ದುಕೊಡಲು ಹೇಳಿದನು. ಅವನು "ಓ ನಮ್ಮ ಮಹರಾಜರು. ನಿಮಗೆ ಇಲ್ಲ ಎನ್ನಲಾಗುವುದೇ?.." ಎಂದು ಸಾಕಷ್ಟು ಹಣ್ಣನ್ನು ಕೊಯ್ದು ಅವನಿಗೆ ಬುಟ್ಟಿಯಲ್ಲಿ ತುಂಬಿಸಿಕೊಟ್ಟನಂತೆ. ಆಗ ಮೊದಲೇ ಹಸಿದಿದ್ದ ರಾಜನು ಆ ಹಣ್ಣುಗಳನ್ನು ನೋಡಿ ಗಬಗಬ ತಿಂದನಂತೆ. ದೀರ್ಘವಾಗಿ ಒಂದು ತೇಗು ಬರಿಸಿ "ಮೆಚ್ಚಿದೆ ನಿನ್ನ . ನೀನು ಮಾಡಿದ ಸಹಾಯಕ್ಕೆ ತಗೋ ಕೈತುಂಬಾ ಚಿನ್ನದ ನಾಣ್ಯಗಳನ್ನು ಕೊಡುವೆ .." ಎಂದು ಹೇಳಿ ಒಂದು ರೇಶಿಮೆ ಗಂಟನ್ನು ನೀಡಿದನು‌. ಕುದುರೆಯನ್ನೇರಿ ಮುಂದೆ ಹೋದನು. ಹೀಗೆ ಸಾಗುವಾಗ ಒಂದು ಆಲೋಚನೆ ಹೊಳೆಯಿತಂತೆ. "ನಾನು ರಾಜನಾದರೂ ನನಗೆ ಒಂದು ಮರ ಏರಲು ತಿಳಿದಿಲ್ಲ. ಇದು ಎಂತಹ ಅವಮಾನ.." ಎಂದು ಮನದಲ್ಲೇ ಮರುಗಿದನು.
ನಂತರ ಬಹಳಷ್ಟು ದೂರ ಸಾಗುತ್ತಲೇ ಬಿಸಿಲು ಹೆಚ್ಚಾಗಿ ಸುಸ್ತಿನ ಜೊತೆಗೆ ನಿದಿರೆ ಬರಲು ಶುರುವಾಯಿತು. ಸುತ್ತಮುತ್ತ ನೋಡಿದರೆ ಎಲ್ಲೂ ಮಲಗಲು ಜಾಗವಿಲ್ಲ . ಅವನಿಗೆ ಏನು ಮಾಡುವುದು ಎಂದು ತಿಳಿಯದೇ ಕುದುರೆಯಿಂದ ಕೆಳಗಿಳಿದು  ಅಲ್ಲೇ ಮರದ ಕೆಳಗೆ ಕುಳಿತನು‌ . ಹಾಗೆ ಮಲಗಿದನು. ಆದರೆ ಎಷ್ಟು ಸಮಯವಾದರೂ ನಿದಿರೆ ಬರುತ್ತಿರಲಿಲ್ಲ. ಆಗ ದೂರದಲ್ಲಿ ಒಬ್ಬ ಮರಗೆಲಸದವನು ತನ್ನ ತಲೆಗೆ ಕಟ್ಟಿದ್ದ ತುಂಡು ಬಟ್ಟೆಯನ್ನು ಹಾಸಿ ಗಾಢ ನಿದಿರೆಗೆ ಜಾರಿದ್ದ. ಅವನ ಗೊರಕೆಯ ಸದ್ದು ರಾಜನವರೆಗೂ ಕೇಳಿಸುತಲಿತ್ತು‌ . ರಾಜನಿಗೆ ಮತ್ತೆ ಯೋಚನೆ ಹತ್ತಿತು‌. "ಅವನಿಗೆ ಆ ಭಗವಂತ ಅದೆಷ್ಟು ಸುಖನಿದ್ರೆ ಕರುಣಿಸಿದ್ದಾನೆ. ಏನೂ ಇಲ್ಲದೆ, ಕಲ್ಲು ಮಣ್ಣು ತರಗೆಲೆಯ ಮೇಲೆಯೇ ಗಾಢನಿದಿರೆ ಮಾಡುತ್ತಿರುವನಲ್ಲ.. ನನಗೇಕೆ ನಿದಿರೆ ಬರುತ್ತಿಲ್ಲ.." ಎಂದು. ಮತ್ತೆ ಅವನ ಕರೆದು ಕೇಳಿದನಂತೆ "ನಿನಗೆ ಹೇಗೆ ಇಷ್ಟು ನಿದಿರೆ ಬರುತ್ತದೆ. ಈ ಮಣ್ಣು ಧೂಳಿನಲ್ಲಿ ನನಗೆ ಕೂರಲು ಮನಸ್ಸಾಗುತ್ತಿಲ್ಲ.." ಎಂದು. ಆಗ ಮರಗೆಲಸದವನು ಒಮ್ಮೆ ರಾಜನನ್ನು ನೋಡಿ ಖುಷಿಯಾಗಿ ಮತ್ತೆ ಬೆಸ್ತುಬಿದ್ದು ಸಾವರಿಸಿಕೊಂಡು  ಹೇಳಿದನಂತೆ " ಬುದ್ಧೀ ನೀವು. ನೀವೇಕೆ ಇಲ್ಲಿ ಬಂದಿರಿ‌ ನಮ್ಮ ಬದುಕೇ ಹೀಗೆ. ಕಷ್ಟಪಟ್ಟು ದುಡಿದರೆ ದೇಹಕ್ಕೆ ಆಯಾಸವಾಗುತ್ತದೆ. ಆಗ ಎಲ್ಲಿ ಮಲಗಿದರೂ ನಿದಿರೆ ಬರುತ್ತದೆ. ನಮ್ಮದು ಮರಕಡಿಯುವ ಕೆಲಸ ಸ್ವಾಮಿ. ರೆಟ್ಟೆ ಮುರಿದು ಕೆಲಸ ಮಾಡಬೇಕು. ಆಗಲೇ ಮೂರ್ಕಾಸು ಸಿಗುತ್ತದೆ. ಎಂದು.  ರಾಜನಿಗೆ ಬೇಸರವಾಯಿತು. ತಾನು ತಂದಿದ್ದ ರೇಶಿಮೆ ಗಂಟನ್ನು ಅವನ ಕೈಗಿತ್ತು ಕುದುರೆಯನ್ನೇರಿದನು. ದಾರಿ ಮಧ್ಯೆಯಲ್ಲಿ ಮತ್ತೆ ಚಿಂತೆ ಕಾಡಿತು‌.
ಹೀಗೆ ಮುಂದೆ ಹೋಗುವಾಗ ನದಿ ಕಾಣಿಸಿತು. ರಾಜನಿಗೆ ಈಜು ಬರುತ್ತಿರಲಿಲ್ಲ. ಅಲ್ಲಿ ನೋಡಿದರೆ ಚಿಕ್ಕ ಮಕ್ಕಳೆಲ್ಲ ನೀರಿನಲ್ಲಿ ಈಜುತ್ತಾ ಆಟವಾಡುತ್ತಾ ಇದ್ದರು. ಕತ್ತಲಾಗುತ್ತಾ ಬಂದಿತ್ತು. ರಾಜನಿಗೆ ನದಿ ದಾಟಿ ಅರಮನೆ ತಲುಪಲೇ ಬೇಕಾಯಿತು. ಆದರೆ ಏನು ಮಾಡುವುದು.? ಕೂಡಲೇ ಅಲ್ಲಿದ್ದ ಜನರನ್ನು ಕರೆದ‌. ಹೇಳಲು ಮುಜುಗರವಾಯಿತು. ಆದರೆ ತೋರಿಸಿಕೊಳ್ಳದೇ ಗಾಂಭೀರ್ಯದಿಂದ "ನಾನು ರಾಜ , ಆಜ್ಞೆ ಮಾಡುತ್ತಿರುವೆ. ನನ್ನನ್ನು ಮತ್ತು ಕುದುರೆಯನ್ನು ಈ ನದಿಯಿಂದ ದಾಟಿಸಿ ಆ ದಡಕ್ಕೆ ಕೊಂಡೊಯ್ಯಿರಿ..." ಎಂದು. ಜನರೆಲ್ಲರೂ ಓಡೋಡಿ ಬಂದು ರಾಜನನ್ನೂ ಹೊತ್ತು ನದಿಯಲ್ಲಿ ನಡೆದರು‌ ಕುದುರೆಯನ್ನು ಎಳೆದುಕೊಂಡು ಸಾಗಿ ದಡ ಮುಟ್ಟಿಸಿದರು. ರಾಜನಿಗೆ ಒಳಗೊಳಗೆ ದಡ ಸೇರಿದ ಖುಷಿಯಾಯಿತು. ಮತ್ತೆ ತಂದಿದ್ದ ರೇಶಿಮೆ ಗಂಟನ್ನು ಅವರ ಕೈಗಿಟ್ಟು ಈ ಚಿನ್ನದ ನಾಣ್ಯಗಳನ್ನು ಎಲ್ಲರೂ ಹಂಚಿಕೊಳ್ಳಲು ತಿಳಿಸಿದನು. ಕುದುರೆಯನ್ನೇರಿ ಅರಮನೆ ಕಡೆಗೆ ಸಾಗಿದನು. ಆದರೆ ಏನೇನೋ ಪ್ರಶ್ನೆಗಳು, ಚಿಂತೆಗಳು ಕಾಡಿದವು. ಹಾಗೆ ತಲೆತಗ್ಗಿಸಿಕೊಂಡು ಅರಮನೆಯಲ್ಲಿನ ತನ್ನ ಅಂತಃಪುರಕ್ಕೆ ತೆರಳಿದನು‌.
ತನ್ನ ಮಡದಿ ಮಹಾರಾಣಿಯನ್ನು ಕರೆದು ಬಳಿಯಲ್ಲಿ ಕುಳಿತುಕೊಳ್ಳಲು ಹೇಳಿದನು. ಹಾಗೆಯೇ ಆ ದಿನ ನಡೆದ ಘಟನೆಯನ್ನೆಲ್ಲ ವಿವರಿಸಿದನು. "ನಾನು ರಾಜ. ನನಗೆ ತಿಳಿಯದೇ ಇರುವ ವಿದ್ಯೆಯೇ ಇಲ್ಲ ಎಂದನಿಸಿದ್ದೆ. ಆದರೆ ಮರ ಏರಿ ಹಣ್ಣುಗಳನ್ನು ಕೊಯ್ಯುವ ಕಲೆ ನನಗೆ ತಿಳಿದೇ ಇಲ್ಲ..."
"ನಾನು ರಾಜ. ಸುಖದ ಅರಮನೆಯಲ್ಲಿ ಹೇಗೆ ಬೇಕಾದರೂ ಮಲಗುವೆ. ಎಂದೆನಿಸಿದ್ದೆ.  ಆದರೆ ಅಲ್ಲೊಬ್ಬ ಮಣ್ಣಿನ ಮೇಲೆಯೇ ಸುಖವಾಗಿ ಮಲಗಿದ್ದ. ನನಗೆ ಅಲ್ಲಿ ನಿದಿರೆಯೇ ಬರಲಿಲ್ಲ.."
"ನಾನು ರಾಜ. ಆದರೂ ಈಜಿ ನದಿ ದಾಟಲು ತಿಳಿದಿಲ್ಲ.."
"ಈ ಅರಮನೆಯಿಂದ ಒಮ್ಮೆಯೂ ಹೊರಗೆ ಹೋದವನೇ ಅಲ್ಲ. ಈ ಆಸ್ತಿ ಧನಕನಕದಲ್ಲಿಯೇ ನಾನು ಬದುಕುತ್ತಾ ಇದ್ದೇನೆ. ಇದನ್ನೇ ಸುಖ ಜೀವನ ಎಂದು ಭಾವಿಸಿರುವೆ. ಆದರೆ ಅವರೆಲ್ಲ ಅಷ್ಟೋ ಇಷ್ಟೋ ಹಣದಲ್ಲಿ ಹೇಗೆ ಸುಖವಾಗಿದ್ದಾರೆ ನೋಡು.
ಆಗ ಮಹಾರಾಣಿ ಹೇಳಿದಳಂತೆ, "ನೀವು ರಾಜ" ಎಂಬ ಮನಸ್ಥಿತಿಯೇ ನಿಮಗೆ ಮುಳ್ಳಾಗಿದೆ‌. ಸಾಮಾನ್ಯರಲ್ಲಿ ಸಾಮಾನ್ಯರಾಗಿ ಬದುಕಿರಿ. ಆಗ ಎಲ್ಲವೂ ನಿಮಗೆ ಸಿದ್ಧಿಸುತ್ತದೆ.  ಪ್ರಜೆಗಳು ಬಹಳ ಕಷ್ಟದಲ್ಲಿ ಅವರ ಬದುಕು ನಡೆಸುತ್ತಾ ಇದ್ದಾರೆ. ನೀವು ಅರಿತುಕೊಳ್ಳಿ. ಎಂದು. ಆಗ ರಾಜನಿಗೆ ತನ್ನ ತಪ್ಪಿನ ಅರಿವಾಯಿತು‌. ಹಣ-ವೈಭೋಗದಿಂದ ಸುಖಸಿಗುವುದಿಲ್ಲ ಎಂದು. ಮುಂದೆ ಪ್ರಜೆಗಳ ಒಳಿತಿಗಾಗಿ ಅನೇಕ ನಿಯಮಗಳನ್ನು ಜಾರಿಗೆ ತಂದನು. ಅವರಿಗಾಗಿಯೇ ಬದುಕಿದನು.
.
.
ಸಿಂಧು ಭಾರ್ಗವ್. ಬೆಂಗಳೂರು-೨೧


೨)

Thursday, 6 June 2019

Kanakadhara stotram behind story in kannada

(Google pick ) Adi Shankaracharyaru

Kanakadhara stotra.( Google pick)

ಪೌರಾಣಿಕ ಕಥೆ : ಶಂಕರಾಚಾರ್ಯ ಕೃತ ಕನಕಧಾರಾ ಸ್ತೋತ್ರ

ಇದು ೮ನೇ ಶತಮಾನದ ಕಥೆ‌ . ತಮ್ಮ ಎಂಟನೇ ವಯಸ್ಸಿನಲ್ಲಿಯೇ ಸನ್ಯಾಸ ಸ್ವೀಕರಿಸಿ ಬಾಲ ಶಂಕರಾಚಾರ್ಯರು ಎಂದಿನಂತೆ ತಮ್ಮ ಶಿಷ್ಯರೊಡನೆ ಕೇರಳದ ಹಳ್ಳಿಯೊಂದಕ್ಕೆ ಬರುತ್ತಾರೆ. ಮಧುಕರ ವೃತ್ತಿಯನ್ನು ಅನುಸರಿಸುತ್ತಾ ಹೊರಟಿದ್ದರು. ಹೀಗೆ ಮಾರ್ಗಮಧ್ಯದಲ್ಲಿ ಒಂದು ಮುರುಕು‌ಮನೆ ಕಾಣಿಸಿತು. ಆ ಮನೆಯ ಎದುರು ನಿಂತು "ಭವತಿ ಭಿಕ್ಷಾಂದೇಹಿ" ಎಂದು ಕೂಗಿದರು. ಆಗ ಮನೆಯ ಬಡಬ್ರಾಹ್ಮಣ ಹೆಂಗಸಿಗೆ ದಿಗಿಲಾಯಿತು. ಕಾರಣ ಕಿತ್ತು ತಿನ್ನುವ ಬಡತನ. ಭಿಕ್ಷೆಗೆ ಕೊಡಲು ಏನೂ ಅವರಲ್ಲಿ ಇರಲಿಲ್ಲ. ಹಾಗೆಯೆ ಯತಿಗಳಿಗೆ ಇಲ್ಲ ಎಂದು ಮುಂದೆ ಕಳುಹಿಸಲೂ ಆಗದು. ಆದ ಕಾರಣ ಮತ್ತೆ ಮನೆಯನ್ನೆಲ್ಲ ತಡಕಾಡಿದಳು. ಆಗ ಅವಳಿಗೆ ಒಂದು  ಒಣಗಿದ ನೆಲ್ಲಿಕಾಯಿ ಸಿಕ್ಕಿತು‌. ಅದು ಕೂಡ ತಮ್ಮ ಹಸಿವನ್ನು ನೀಗಿಸಿಕೊಳ್ಳಲು ಪಾನಕ ಮಾಡಿ ಕುಡಿಯಲೋಸುಗ ಇಟ್ಟಿದ್ದರು. ಅದನ್ನು ದಾಕ್ಷಣ್ಯದಿಂದಲೇ ವಟುವಿಗೆ ನೀಡಲು‌ ನಿರ್ಧರಿಸಿದಳು‌. ತನ್ನ ಗುಡಿಸಿಲಿನ ಮುಂದೆ ಕಾಯುತ್ತ ನಿಂತಿದ್ದ ಶಂಕರರಿಗೆ ನಮಸ್ಕರಿಸಿ "ಸ್ವಾಮಿ ನಾವು ಕಡುಬಡವರು. ನಿಮಗೆ ಕೊಡಲು ಏನೂ ಇಲ್ಲ. ಹಾಗಾಗಿ ಈ ನೆಲ್ಲಿಕಾಯಿಯನ್ನೇ ಭಕ್ತಿಯಿಂದ ನೀಡುತ್ತಿರುವೆ.ದಯಮಾಡಿ ಸ್ವೀಕರಿಸಿ ಅನುಗ್ರಹಿಸಬೇಕು" ಎಂದು ಕಾಲಿಗೆ ಬಿದ್ದು ನಮಸ್ಕರಿಸಿದಳು.  
 ಆ ಬಡ ಬ್ರಾಹ್ಮಣ ಹೆಂಗಸಿನ ದಯನೀಯ ಸ್ಥಿತಿ ಕಂಡು ಶಂಕರಾಚಾರ್ಯರಿಗೆ ಮನ ಕಲಕಿತು‌. ಅವಳ ತ್ಯಾಗ ಮತ್ತು ಭಕ್ತಿಯನ್ನು ನೋಡಿ ಅರಿತುಕೊಂಡರು. ಕೂಡಲೇ ಪರಮ ಪಾವನಿ , ಐಶ್ವರ್ಯ ಸ್ವರೂಪಿಣಿ ಜ್ಞಾನಿಗಳ ಅಂತರಂಗದಲ್ಲಿ ನೆಲೆಸಿರುವ ಬುದ್ಧಿಸ್ವರೂಪಿಣಿ, ಬೇಡಿದ ವರಕೊಡುವ ಮಹಾಲಕ್ಷ್ಮಿಯನ್ನು ಪ್ರಾರ್ಥಿಸುತ್ತಾರೆ. ಈ ಬಡ ಕುಟುಂಬವನ್ನು ಉದ್ಧಾರಮಾಡಬೇಕೆಂದು ಕೋರಿಕೆಯನ್ನಿಡುತ್ತಾರೆ. ನಿಂತ ಜಾಗದಲ್ಲಿಯೇ ೨೧ಶ್ಲೋಕವನ್ನು ರಚಿಸಿ ಹಾಡುತ್ತಾರೆ. ಮಹಾಮಾತೆ ಲಕ್ಷ್ಮಿಯನ್ನು ಪರಿ ಪರಿಯಾಗಿ ವರ್ಣಿಸುತ್ತಾರೆ. 

ಸರಸಿಜ ನಿಲಯೇ ಸರೋಜ ಹಸ್ತೇ
ಧನಲ ತಮಾಂಶುಕ ಗಂಧಮಾಲ್ಯ ಶೋಭೆ!
ಭಗವತೀ ಹರಿವಲ್ಲಭೇ ಮನೋಜ್ಞೆ!
 ತ್ರಿಭುವನ ಭುತಿಕರೀ ಪ್ರಸೀದ ಮಹ್ಯಂ!
          ಈ ಇಪ್ಪತ್ತೊಂದು ಶ್ಲೋಕಗಳ ಮಹಾಮಹಿಮ ಸ್ತೋತ್ರವೇ "ಕನಕಧಾರಾ ಸ್ತೋತ್ರ" ಇಲ್ಲ "ಕನಕವೃಷ್ಟಿಸ್ತೋತ್ರ" ವೆಂದು ಕರೆಯಲಾಯಿತು.

ಅವರ ಶ್ರದ್ಧಾ ಭಕ್ತಿಗೆ ಮೆಚ್ಚಿ ಜಗನ್ಮಾತೆ ಮಹಾಲಕ್ಷ್ಮಿ ಗುಡಿಸಲಿನ ಹಿಂದುಗಡೆಯಿಂದ ಪ್ರತ್ಯಕ್ಷಳಾಗಿ "ಎಲೈ ಬಾಲಕನೇ ನಿನಗೆ ಏನು ವರ ಬೇಕು ಕೇಳು" ಎಂದು ಹೇಳಿದಳು. ಆಗ ಬಾಲಕ ಶಂಕರರು ನನಗೇನು ಬೇಡ ತಾಯಿ. ಈ ಬಡ ಕುಟುಂಬದ ಕಷ್ಟವನ್ನೆಲ್ಲ ಬಗೆಹರಿಸಿ ಅವರನ್ನು ಉದ್ಧರಿಸು ಎಂದನು. ಮಹಾಲಕ್ಷ್ಮಿಯು "ಪೂರ್ವಜನ್ಮದ ಕರ್ಮಫಲವಾಗಿ ಈ ಜನ್ಮದಲಿ‌ ಮನುಷ್ಯನ ಜನನವಾಗುತ್ತದೆ. ಅದನ್ನು ಅನುಭವಿಸಲೇ ಬೇಕು. ಅಲ್ಲದೇ ಅವಳು ಪೂರ್ವಜನ್ಮದಲ್ಲಿ ಅಂತಹ ಪುಣ್ಯದ ಕೆಲಸ ಮಾಡಲಿಲ್ಲ. ಹಾಗಾಗಿ ಬದಲಾಯಿಸಲು ಸಾಧ್ಯವಾಗದು " ಎಂದಳು. ಅದಕ್ಕೆ ಶಂಕರಾಚಾರ್ಯರು "ಮಾತೇ ಭಗವತೀ... ಒಂದು ಮಹಿಳೆಗೆ ಮಾತ್ರ ಬ್ರಹ್ಮನೇ ಬರೆದಿರುವ ಹಣೆಬರಹವನ್ನು ಬದಲಾಯಿಸಲು ಸಾಧ್ಯ. ಹಾಗಾಗಿ ಇವಳಿಗೆ ನೀನೇ ಕರುಣೆ ತೋರಿಸಬೇಕು ಎಂದರು. ಮಹಾಲಕ್ಷ್ಮಿಗೆ ಮಂದಸ್ಮಿತಳಾಗಿ ಮೆಚ್ಚಿದೆ ನಿನ್ನ ಮಾತಿಗೆ ಎಂದು ಸಂಪೂರ್ಣ ಚಿನ್ನದ ನೆಲ್ಲಿಕಾಯಿಗಳನ್ನೆ ಮಳೆಗೆರೆದಳು.  ಶಂಕರಭಗವತ್ಪಾದರ ಪವಾಡ, ಅನುಗ್ರಹದಿಂದ ಬಡಬ್ರಾಹ್ಮಣ ಮಹಿಳೆಯ ಮನೆಯ ಚಿತ್ರಣವೇ ಬದಲಾಯಿತು. ಕುಟುಂಬವೇ ಆನಂದದಿಂದ ನಲಿದಾಡಿದರು‌ . ಶಂಕರರ ಶಿಷ್ಯವೃಂದ ಇದನ್ನು ಕಂಡು ದಿಗ್ಮೂಢವಾಗುತ್ತದೆ.  ಬಡಬ್ರಾಹ್ಮಣ ದಂಪತಿಗಳ ಕಣ್ಣಲ್ಲಿ ಆನಂದಭಾಷ್ಪ ಹರಿಯುತ್ತದೆ. ಮತ್ತೊಮ್ಮೆ ಶಂಕರರ ದಿವ್ಯ ಪಾದಗಳಿಗೆ ಎರಗಿ ತಮ್ಮನ್ನು ಉದ್ಧಾರ ಮಾಡಿದಕ್ಕಾಗಿ ನಮಸ್ಕರಿಸುತ್ತಾರೆ. ಆಗ ಇದು ನಮ್ಮಲ್ಲಿರುವ ಅಚಲ ಭಗವದ್ಭಕ್ತಿ, ಶ್ರದ್ಧೆ, ಶರಣಾಗತಿ , ಆತ್ಮಸಮರ್ಪಣೆಗಳ ಫಲವೇ ಆಗಿದೆ. ಯಾರು ಸೃವಶಕ್ತನಾದ ಪರಮಾತ್ಮನಲ್ಲಿ ಶ್ರವಣ, ಕೀರ್ತನ, ಸ್ಮರಣ, ಪಾದಸೇವನ, ಅರ್ಚನ, ವಂದನ, ದಾಸ್ಯ, ಸುಖ, ಆತ್ಮನಿವೇದೆಗಳೆಂಬ ನವವಿಧ ಭಕುತಿಯಿಂದ ಪ್ರಾರ್ಥಿಸುತ್ತಾರೋ ಅವರು ಎಂದೂ ನಾಶವಾಗುವುದಿಲ್ಲ ಎಂದು ಸಾರಿ ತಮ್ಮ ವಿಜಯಯಾತ್ರೆಯನ್ನು ಮುಂದುವರೆಸುತ್ತಾರೆ. 

ಹಾಗಾಗಿ ಅಂದಿನಿಂದ ಇಂದಿನವರೆಗೂ ಭಕ್ತಾದಿಗಳು ಬಹಳ ಶ್ರದ್ಧೆಯಿಂದ ಆತ್ಮನಿವೇದನೆ ಮಾಡಿಕೊಳ್ಳುತ್ತಾರೆ‌ . ಕನಕಧಾರಾ ಸ್ತೋತ್ರವನ್ನು ಪ್ರತೀ ಶುಕ್ರವಾರ ಪಠಿಸಿ ಜಗನ್ಮಾತೆ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗುತ್ತಾರೆ. 


ಸಿಂಧು ಭಾರ್ಗವ್.
ಬೆಂಗಳೂರು-೨೧

Wednesday, 5 June 2019

Story_Don't be selfish ಸ್ವಾರ್ಥಿಯಾಗದಿರಿ

ಮಕ್ಕಳ ಕಥೆ:-  ಸ್ವಾರ್ಥಿಯಾಗದಿರಿ
Google pick

ಕಾನನದ ಮಧ್ಯದಲ್ಲಿ ಒಂದು ಗಿಡುಗನ ಗೂಡು ಹಾಗೂ ಕಾಗೆಯ ಗೂಡಿತ್ತು. ಎರಡೂ ತಮ್ತಮ್ಮ ಗೂಡಿನಲ್ಲಿ ಮರಿಗಳ ಜೊತೆಗೆ ವಾಸವಾಗಿದ್ದವು. "ಚೀವ್ ಚೀವ್..." ಎಂಬ ಚಿಲಿಪಿಲಿಯು ಯಾವಾಗಲೂ  ಕೇಳಿಸುತಲಿತ್ತು. ಗಿಡುಗನು ತನ್ನ ಗೂಡಿನ ಮೇಲೆಯೇ ಗಸ್ತು ಹೊಡೆಯುತ್ತಾ ಇರುತ್ತಿತ್ತು. ದೂರದೂರಿಗೆ ಹಾರಿ ಹೋಗಿ ಗಂಡು ಗಿಡುಗವು ಆಹಾರ ತರುವ ತನಕ ಹೆಣ್ಣು ಗಿಡುಗವು ಮರಿಗಳನ್ನು ಕಾಯುತಲಿತ್ತು. ಇದನ್ನೆಲ್ಲ ದೂರದಿಂದ  ನೋಡುತ್ತಿದ್ದ ಕಾಗೆಗೆ , "ಆ ಗೂಡಿನಲ್ಲಿವೇನಿರಬಹುದು. ಈ ಗಿಡುಗ ಏಕೆ ಗಸ್ತು ಹೊಡೆಯುತ್ತಿದೆ.."ಎಂದು ಪ್ರಶ್ನೆ ಮೂಡಿತು‌. ಒಮ್ಮೆ ಹೋಗಿ ನೋಡಲೇ ಬೇಕು ಎಂಬ ಕುತೂಹಲ ಹೆಚ್ಚಿತು. ಆದರೆ ಆ ಹೆಣ್ಣು ಗಿಡುಗವೂ ಎಲ್ಲಿಗೂ ಕದಲುತ್ತ ಇರಲಿಲ್ಲ‌.

ಒಮ್ಮೆ ಆ ಸಮಯ ಬಂದೇ ಬಿಟ್ಟಿತು. ಹೆಣ್ಣು ಗಿಡುಗ ಆಕಾಶದೆತ್ತರಕ್ಕೆ ಹಾರಿ ಮಾಯವಾಯಿತು. ಆಗ ಕಾಗೆಗೆ ಬಹಳ ಸಂತೋಷವಾಗಿ  ಗಿಡುಗನ ಗೂಡಿನ ಬಳಿ ಹಾರಿ ಬಂದಿತು. ಅಲ್ಲಿ ನೋಡಿದರೆ ಪರಮಾಶ್ಚರ್ಯ. " ಗಿಡುಗನಿಗೆ ಪುಟ್ಟಪುಟ್ಟ ಮೂರು ಮರಿಗಳಿದ್ದವು. ಎಳೆಮರಿಗಳ ನೋಡಿ ಕಾಗೆಯೆ ಬಾಯಲ್ಲಿ ನೀರು ಬಂದಿತು. ಹೇಗಾದರೂ ಮಾಡಿ ಇದನ್ನು ಹೊತ್ತೊಯ್ದು ತನ್ನ ಮರಿಗಳಿಗೆ ಆಹಾರವಾಗಿ ಕೊಡಬೇಕು ಎಂಬ ಕೆಟ್ಟ ಆಲೋಚನೆ ಮಾಡಿತು. ಹಾಗೆಯೇ ಒಂದನ್ನು ಅಲ್ಲಿಯೇ ತಿಂದು, ಒಂದನ್ನು ತನ್ನ ಕೊಕ್ಕಿನಿಂದ ಕುಕ್ಕಿ ಕುಕ್ಕಿ ಸಾಯಿಸಿತು. ಹಾಗೆಯೇ ಸತ್ತ ಗಿಡುಗನ ಮರಿಯನ್ನು ಕಾಲಿನಲ್ಲಿ ಬಿಗಿಹಿಡಿತು ತನ್ನ ಗೂಡಿನತ್ತ ಹಾರಿಹೋಯಿತು.

ಅಲ್ಲಿ ನೋಡಿದರೆ ಏನ್ ಆಶ್ಚರ್ಯ. ಗಾಬರಿ ಹುಟ್ಟಿಸುವ ಘಟನೆ ನಡೆದಿತ್ತು. ತನ್ನ ಮರಿಗಳ ಪುಕ್ಕಗಳೆಲ್ಲ ಚೆಲ್ಲಪಿಲ್ಲಿಯಾಗಿ ಬಿದ್ದಿದ್ದವು. ಮರಿಗಳು ಕಾಣಿಸುತ್ತಿಲ್ಲ. "ಅಯ್ಯೋ... ನನ್ನ ಮರಿಗಳೆಲ್ಲಿ ??" ಎಂದು ಗೋಳಾಡಿತು. "ನಾನು ಅವುಗಳಿಗೆ ತಂದ ಈ ಹಸಿ ಮಾಂಸವನ್ನು ಏನು ಮಾಡಲಿ. ಇದನ್ನು ತಿನ್ನಲು ಈಗ ನನ್ನ ಮರಿಗಳೇ ಇಲ್ಲವಲ್ಲ .." ಎಂದು ಕೊರಗುತ್ತಾ  ಕುಳಿತಿತು. ಆಗ ದೂರದಲ್ಲಿ ಅದೇ ಗಿಡುಗ ತನ್ನ ಕಾಲಿನಲ್ಲಿ ಏನೋ ಆಹಾರ ಹಿಡಿದಿರುವುದು ಕಾಣಿಸಿತು. ಏನೆಂದು ಕಾಗೆ ಅದರ ಕಡೆಗೆ ಧಾವಿಸಿ ನೋಡಿದರೆ ತನ್ನ ಮರಿಯ ಹಸಿಮಾಂಸವೇ ಆಗಿತ್ತು. ಅತ್ತ ಗಿಡುಗನಿಗೆ ಉಳಿದಿದ್ದ ಒಂದು ಮರಿ ಗಾಬರಿಯಿಂದ ಕಿರುಚುತ್ತ ಅಮ್ಮ ಬರುವುದನ್ನೇ ಕಾಯುತಲಿತ್ತು.

ನೀತಿ: ನಾವು ಕೇಡು ಬಯಸಿದರೆ ನಮಗೂ ಕೇಡು ಸಂಭವಿಸುತ್ತದೆ ‌ ಕಾಗೆ ಗಿಡುಗನ ಮರಿಗಳನ್ನು ಸಾಯಿಸಿದ ಹಾಗೆ ಗಿಡುಗವೂ ಸ್ವಾರ್ಥಿಯಾಗಿ ಕಾಗೆಯ ಮರಿಯನ್ನು ಸಾಯಿಸಿತ್ತು.


- ಸಿಂಧು ಭಾರ್ಗವ್.
 ಬೆಂಗಳೂರು- ೨೧

Tuesday, 4 June 2019

ಪರಿವರ್ತನೆ

ಮಕ್ಕಳ ಕಥೆ: ಪರಿವರ್ತನೆ(ಸಾಮಾನ್ಯರಲ್ಲಿ ಸಾಮಾನ್ಯರಾಗಿ ಬಾಳಿರಿ)




ಒಬ್ಬ ರಾಜ ತನ್ನ ರಾಜ್ಯವನ್ನು ನೋಡಲು ಕುದುರೆಯನೇರಿ ಹೊರಟನು. ಅವನ ರಾಜ್ಯದ ಜನರ ಸ್ಥಿತಿಗತಿಯನ್ನು ಪರೀಕ್ಷಿಸಿ ಕಷ್ಟನೋವುಗಳನ್ನು ಕೇಳಿ ಅವರಿಗೆ ಸಮಾಧಾನ ಮಾಡಿ, ಕೈಲಾದ ಸಹಾಯ ಮಾಡಲು ಹೊರಟಿದ್ದನಂತೆ. ಹೀಗೆ ಒಂದು ಊರಿನ ಹಾದಿಯಲ್ಲಿ ಹೋಗುವಾಗ ತುಂಬಾ ಹಸಿವಾಯಿತಂತೆ. ತಿನ್ನಲು ಏನೂ  ಕೊಂಡೊಯ್ದಿರದ ಕಾರಣ ಸುತ್ತಮುತ್ತ ನೋಡಿದ. ಆಗ ಒಂದು ಬ್ರಹದಾಕಾರದ ಮರದಲ್ಲಿ ತುಂಬಾ ಹಣ್ಣುಗಳು ಜೋತುಬಿದ್ದಿದ್ದವು. ಅದನ್ನು ಕಂಡು ಬಾಯಿಯಲ್ಲಿ ನೀರು ಬಂದಿತು. ಆದರೆ ಆ ಮರ ಎತ್ತರವಿದ್ದ ಕಾರಣ ಒಂದು ಹಣ್ಣೂ ಕೈಗೆ ಎಟಕುತ್ತ ಇರಲಿಲ್ಲ. ಹಾಗಾಗಿ ಅವನಿಗೆ ಬೇಸರವಾಯಿತು‌. ಆಗ ಅಲ್ಲೇ ಇದ್ದ ಒಬ್ಬ ಮರ ಕಡಿಯುವವನಲ್ಲಿ ಆ ಹಣ್ಣುಗಳನ್ನು ಕೊಯ್ದುಕೊಡಲು ಹೇಳಿದನು. ಅವನು "ಓ ನಮ್ಮ ಮಹರಾಜರು. ನಿಮಗೆ ಇಲ್ಲ ಎನ್ನಲಾಗುವುದೇ?.." ಎಂದು ಸಾಕಷ್ಟು ಹಣ್ಣನ್ನು ಕೊಯ್ದು ಅವನಿಗೆ ಬುಟ್ಟಿಯಲ್ಲಿ ತುಂಬಿಸಿಕೊಟ್ಟನಂತೆ. ಆಗ ಮೊದಲೇ ಹಸಿದಿದ್ದ ರಾಜನು ಆ ಹಣ್ಣುಗಳನ್ನು ನೋಡಿ ಗಬಗಬ ತಿಂದನಂತೆ. ದೀರ್ಘವಾಗಿ ಒಂದು ತೇಗು ಬರಿಸಿ "ಮೆಚ್ಚಿದೆ ನಿನ್ನ . ನೀನು ಮಾಡಿದ ಸಹಾಯಕ್ಕೆ ತಗೋ ಕೈತುಂಬಾ ಚಿನ್ನದ ನಾಣ್ಯಗಳನ್ನು ಕೊಡುವೆ .." ಎಂದು ಹೇಳಿ ಒಂದು ರೇಶಿಮೆ ಗಂಟನ್ನು ನೀಡಿದನು‌. ಕುದುರೆಯನ್ನೇರಿ ಮುಂದೆ ಹೋದನು. ಹೀಗೆ ಸಾಗುವಾಗ ಒಂದು ಆಲೋಚನೆ ಹೊಳೆಯಿತಂತೆ. "ನಾನು ರಾಜನಾದರೂ ನನಗೆ ಒಂದು ಮರ ಏರಲು ತಿಳಿದಿಲ್ಲ. ಇದು ಎಂತಹ ಅವಮಾನ.." ಎಂದು ಮನದಲ್ಲೇ ಮರುಗಿದನು.

ನಂತರ ಬಹಳಷ್ಟು ದೂರ ಸಾಗುತ್ತಲೇ ಬಿಸಿಲು ಹೆಚ್ಚಾಗಿ ಸುಸ್ತಿನ ಜೊತೆಗೆ ನಿದಿರೆ ಬರಲು ಶುರುವಾಯಿತು. ಸುತ್ತಮುತ್ತ ನೋಡಿದರೆ ಎಲ್ಲೂ ಮಲಗಲು ಜಾಗವಿಲ್ಲ . ಅವನಿಗೆ ಏನು ಮಾಡುವುದು ಎಂದು ತಿಳಿಯದೇ ಕುದುರೆಯಿಂದ ಕೆಳಗಿಳಿದು  ಅಲ್ಲೇ ಮರದ ಕೆಳಗೆ ಕುಳಿತನು‌ . ಹಾಗೆ ಮಲಗಿದನು. ಆದರೆ ಎಷ್ಟು ಸಮಯವಾದರೂ ನಿದಿರೆ ಬರುತ್ತಿರಲಿಲ್ಲ. ಆಗ ದೂರದಲ್ಲಿ ಒಬ್ಬ ಮರಗೆಲಸದವನು ತನ್ನ ತಲೆಗೆ ಕಟ್ಟಿದ್ದ ತುಂಡು ಬಟ್ಟೆಯನ್ನು ಹಾಸಿ ಗಾಢ ನಿದಿರೆಗೆ ಜಾರಿದ್ದ. ಅವನ ಗೊರಕೆಯ ಸದ್ದು ರಾಜನವರೆಗೂ ಕೇಳಿಸುತಲಿತ್ತು‌ . ರಾಜನಿಗೆ ಮತ್ತೆ ಯೋಚನೆ ಹತ್ತಿತು‌. "ಅವನಿಗೆ ಆ ಭಗವಂತ ಅದೆಷ್ಟು ಸುಖನಿದ್ರೆ ಕರುಣಿಸಿದ್ದಾನೆ. ಏನೂ ಇಲ್ಲದೆ, ಕಲ್ಲು ಮಣ್ಣು ತರಗೆಲೆಯ ಮೇಲೆಯೇ ಗಾಢನಿದಿರೆ ಮಾಡುತ್ತಿರುವನಲ್ಲ.. ನನಗೇಕೆ ನಿದಿರೆ ಬರುತ್ತಿಲ್ಲ.." ಎಂದು. ಮತ್ತೆ ಅವನ ಕರೆದು ಕೇಳಿದನಂತೆ "ನಿನಗೆ ಹೇಗೆ ಇಷ್ಟು ನಿದಿರೆ ಬರುತ್ತದೆ. ಈ ಮಣ್ಣು ಧೂಳಿನಲ್ಲಿ ನನಗೆ ಕೂರಲು ಮನಸ್ಸಾಗುತ್ತಿಲ್ಲ.." ಎಂದು. ಆಗ ಮರಗೆಲಸದವನು ಒಮ್ಮೆ ರಾಜನನ್ನು ನೋಡಿ ಖುಷಿಯಾಗಿ ಮತ್ತೆ ಬೆಸ್ತುಬಿದ್ದು ಸಾವರಿಸಿಕೊಂಡು  ಹೇಳಿದನಂತೆ " ಬುದ್ಧೀ ನೀವು. ನೀವೇಕೆ ಇಲ್ಲಿ ಬಂದಿರಿ‌ ನಮ್ಮ ಬದುಕೇ ಹೀಗೆ. ಕಷ್ಟಪಟ್ಟು ದುಡಿದರೆ ದೇಹಕ್ಕೆ ಆಯಾಸವಾಗುತ್ತದೆ. ಆಗ ಎಲ್ಲಿ ಮಲಗಿದರೂ ನಿದಿರೆ ಬರುತ್ತದೆ. ನಮ್ಮದು ಮರಕಡಿಯುವ ಕೆಲಸ ಸ್ವಾಮಿ. ರೆಟ್ಟೆ ಮುರಿದು ಕೆಲಸ ಮಾಡಬೇಕು. ಆಗಲೇ ಮೂರ್ಕಾಸು ಸಿಗುತ್ತದೆ. ಎಂದು.  ರಾಜನಿಗೆ ಬೇಸರವಾಯಿತು. ತಾನು ತಂದಿದ್ದ ರೇಶಿಮೆ ಗಂಟನ್ನು ಅವನ ಕೈಗಿತ್ತು ಕುದುರೆಯನ್ನೇರಿದನು. ದಾರಿ ಮಧ್ಯೆಯಲ್ಲಿ ಮತ್ತೆ ಚಿಂತೆ ಕಾಡಿತು‌.

ಹೀಗೆ ಮುಂದೆ ಹೋಗುವಾಗ ನದಿ ಕಾಣಿಸಿತು. ರಾಜನಿಗೆ ಈಜು ಬರುತ್ತಿರಲಿಲ್ಲ. ಅಲ್ಲಿ ನೋಡಿದರೆ ಚಿಕ್ಕ ಮಕ್ಕಳೆಲ್ಲ ನೀರಿನಲ್ಲಿ ಈಜುತ್ತಾ ಆಟವಾಡುತ್ತಾ ಇದ್ದರು. ಕತ್ತಲಾಗುತ್ತಾ ಬಂದಿತ್ತು. ರಾಜನಿಗೆ ನದಿ ದಾಟಿ ಅರಮನೆ ತಲುಪಲೇ ಬೇಕಾಯಿತು. ಆದರೆ ಏನು ಮಾಡುವುದು.? ಕೂಡಲೇ ಅಲ್ಲಿದ್ದ ಜನರನ್ನು ಕರೆದ‌. ಹೇಳಲು ಮುಜುಗರವಾಯಿತು. ಆದರೆ ತೋರಿಸಿಕೊಳ್ಳದೇ ಗಾಂಭೀರ್ಯದಿಂದ "ನಾನು ರಾಜ , ಆಜ್ಞೆ ಮಾಡುತ್ತಿರುವೆ. ನನ್ನನ್ನು ಮತ್ತು ಕುದುರೆಯನ್ನು ಈ ನದಿಯಿಂದ ದಾಟಿಸಿ ಆ ದಡಕ್ಕೆ ಕೊಂಡೊಯ್ಯಿರಿ..." ಎಂದು. ಜನರೆಲ್ಲರೂ ಓಡೋಡಿ ಬಂದು ರಾಜನನ್ನೂ ಹೊತ್ತು ನದಿಯಲ್ಲಿ ನಡೆದರು‌ ಕುದುರೆಯನ್ನು ಎಳೆದುಕೊಂಡು ಸಾಗಿ ದಡ ಮುಟ್ಟಿಸಿದರು. ರಾಜನಿಗೆ ಒಳಗೊಳಗೆ ದಡ ಸೇರಿದ ಖುಷಿಯಾಯಿತು. ಮತ್ತೆ ತಂದಿದ್ದ ರೇಶಿಮೆ ಗಂಟನ್ನು ಅವರ ಕೈಗಿಟ್ಟು ಈ ಚಿನ್ನದ ನಾಣ್ಯಗಳನ್ನು ಎಲ್ಲರೂ ಹಂಚಿಕೊಳ್ಳಲು ತಿಳಿಸಿದನು. ಕುದುರೆಯನ್ನೇರಿ ಅರಮನೆ ಕಡೆಗೆ ಸಾಗಿದನು. ಆದರೆ ಏನೇನೋ ಪ್ರಶ್ನೆಗಳು, ಚಿಂತೆಗಳು ಕಾಡಿದವು. ಹಾಗೆ ತಲೆತಗ್ಗಿಸಿಕೊಂಡು ಅರಮನೆಯಲ್ಲಿನ ತನ್ನ ಅಂತಃಪುರಕ್ಕೆ ತೆರಳಿದನು‌.

ತನ್ನ ಮಡದಿ ಮಹಾರಾಣಿಯನ್ನು ಕರೆದು ಬಳಿಯಲ್ಲಿ ಕುಳಿತುಕೊಳ್ಳಲು ಹೇಳಿದನು. ಹಾಗೆಯೇ ಆ ದಿನ ನಡೆದ ಘಟನೆಯನ್ನೆಲ್ಲ ವಿವರಿಸಿದನು. "ನಾನು ರಾಜ. ನನಗೆ ತಿಳಿಯದೇ ಇರುವ ವಿದ್ಯೆಯೇ ಇಲ್ಲ ಎಂದನಿಸಿದ್ದೆ. ಆದರೆ ಮರ ಏರಿ ಹಣ್ಣುಗಳನ್ನು ಕೊಯ್ಯುವ ಕಲೆ ನನಗೆ ತಿಳಿದೇ ಇಲ್ಲ..."
"ನಾನು ರಾಜ. ಸುಖದ ಅರಮನೆಯಲ್ಲಿ ಹೇಗೆ ಬೇಕಾದರೂ ಮಲಗುವೆ. ಎಂದೆನಿಸಿದ್ದೆ.  ಆದರೆ ಅಲ್ಲೊಬ್ಬ ಮಣ್ಣಿನ ಮೇಲೆಯೇ ಸುಖವಾಗಿ ಮಲಗಿದ್ದ. ನನಗೆ ಅಲ್ಲಿ ನಿದಿರೆಯೇ ಬರಲಿಲ್ಲ.."
"ನಾನು ರಾಜ. ಆದರೂ ಈಜಿ ನದಿ ದಾಟಲು ತಿಳಿದಿಲ್ಲ.."
"ಈ ಅರಮನೆಯಿಂದ ಒಮ್ಮೆಯೂ ಹೊರಗೆ ಹೋದವನೇ ಅಲ್ಲ. ಈ ಆಸ್ತಿ ಧನಕನಕದಲ್ಲಿಯೇ ನಾನು ಬದುಕುತ್ತಾ ಇದ್ದೇನೆ. ಇದನ್ನೇ ಸುಖ ಜೀವನ ಎಂದು ಭಾವಿಸಿರುವೆ. ಆದರೆ ಅವರೆಲ್ಲ ಅಷ್ಟೋ ಇಷ್ಟೋ ಹಣದಲ್ಲಿ ಹೇಗೆ ಸುಖವಾಗಿದ್ದಾರೆ ನೋಡು.

ಆಗ ಮಹಾರಾಣಿ ಹೇಳಿದಳಂತೆ, "ನೀವು ರಾಜ" ಎಂಬ ಮನಸ್ಥಿತಿಯೇ ನಿಮಗೆ ಮುಳ್ಳಾಗಿದೆ‌. ಸಾಮಾನ್ಯರಲ್ಲಿ ಸಾಮಾನ್ಯರಾಗಿ ಬದುಕಿರಿ. ಆಗ ಎಲ್ಲವೂ ನಿಮಗೆ ಸಿದ್ಧಿಸುತ್ತದೆ.  ಪ್ರಜೆಗಳು ಬಹಳ ಕಷ್ಟದಲ್ಲಿ ಅವರ ಬದುಕು ನಡೆಸುತ್ತಾ ಇದ್ದಾರೆ. ನೀವು ಅರಿತುಕೊಳ್ಳಿ. ಎಂದು. ಆಗ ರಾಜನಿಗೆ ತನ್ನ ತಪ್ಪಿನ ಅರಿವಾಯಿತು‌. ಹಣ-ವೈಭೋಗದಿಂದ ಸುಖಸಿಗುವುದಿಲ್ಲ ಎಂದು. ಮುಂದೆ ಪ್ರಜೆಗಳ ಒಳಿತಿಗಾಗಿ ಅನೇಕ ನಿಯಮಗಳನ್ನು ಜಾರಿಗೆ ತಂದನು. ಅವರಿಗಾಗಿಯೇ ಬದುಕಿದನು.

ಸಿಂಧು ಭಾರ್ಗವ್.
ಬೆಂಗಳೂರು-೨೧